ಮಡಿಕೇರಿ: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ಮಡಿಕೇರಿ ಮತ್ತು ವಿರಾಜಪೇಟೆ ಪಟ್ಟಣದಲ್ಲಿ ಮತಯಾಚನೆ ಮಾಡಿದರು.
ಮಡಿಕೇರಿಯ ಚೌಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಅವರು ಕಾಲ್ನಡಿಗೆಯಲ್ಲಿ ಮತ ಯಾಚಿಸಿದರು.
ನಟಿ ತಾರಾ ಅನುರಾಧಾ ಅವರೂ ಈ ವೇಳೆ ಯದುವೀರ ಪರ ಮತ ಯಾಚಿಸಿದರು.
ಮಹದೇವಪೇಟೆಯಿಂದ ಇಂದಿರಾಗಾಂಧಿ ವೃತ್ತದ ಮೂಲಕ ಜನರಲ್ ತಿಮ್ಮಯ್ಯ ವೃತ್ತದ ತನಕ ಮೆರವಣಿಗೆ ನಡೆಸಿದರು.
ಈ ವೇಳೆ ಮಾತನಾಡಿದ ನಟಿ ತಾರಾ ಅನುರಾಧಾ, ‘ಯದುವಂಶದ ಯದುವೀರ ಅವರ ಪರ ಪ್ರಚಾರಕ್ಕೆ ಬಂದಿರುವುದು ಗೌರವ ತಂದಿದೆ. ಅವರು ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.