ಬೆಂಗಾವಲು ಪಡೆಯ ಮೇಲಿನ ದಾಳಿಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಚನ್ನಿ ‘ಚುನಾವಣೆ ಹತ್ತಿರ ಬಂದಾಗಲೆಲ್ಲಾ ಗೆಲುವು ಸಾಧಿಸಲು ಬಿಜೆಪಿಯವರು ಇಂತಹ ಸಾಹಸಗಳನ್ನು ಮಾಡುತ್ತಾರೆ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಜನರ ಪ್ರಾಣ ಮತ್ತು ದೇಹದೊಂದಿಗೆ ಹೇಗೆ ಆಟವಾಡಬೇಕೆಂದು ಬಿಜೆಪಿಗೆ ಗೊತ್ತಿದೆ’ ಎಂದು ಆರೋಪಿಸಿದ್ದಾರೆ.
ಚನ್ನಿ ಅವರ ಹೇಳಿಕೆಯನ್ನು ಖಂಡಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಆಕ್ಷೇಪಾರ್ಹ ಹೇಳಿಕೆಯನ್ನು ನೀಡುವ ಮೂಲಕ ದೇಶದ ಸೈನಿಕರನ್ನು ಅವಮಾನಿಸಲಾಗಿದೆ ಮತ್ತು ದೇಶದ ಸೇನೆಯ ಸಾಮರ್ಥ್ಯವನ್ನು ಪ್ರಶ್ನಿಸಲಾಗಿದೆ. ಚನ್ನಿ ಅವರು ಕ್ಷಮೆಯಾಚಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.