ಅದರ ಹಿನ್ನೆಲೆ ಕುತೂಹಲಕರವಾಗಿದೆ. ಕಾಂಗ್ರೆಸ್ ಪಕ್ಷವು ಅರವಿಂದ್ ದಾಮೋರ್ ಅವರನ್ನು ಕಣಕ್ಕಿಳಿಸಿತ್ತು. ಆದಾಗ್ಯೂ ಕೊನೆಯ ಗಳಿಗೆಯಲ್ಲಿ, ಸಾಕಷ್ಟು ಸಮಾಲೋಚನೆಯ ನಂತರ, ನಾಮಪತ್ರ ಹಿಂತೆಗೆದುಕೊಳ್ಳಲು ಇನ್ನು ಒಂದು ದಿನ ಬಾಕಿ ಇದೆ ಎನ್ನುವಾಗ ಕಾಂಗ್ರೆಸ್ ಪಕ್ಷವು, ಭಾರತ್ ಆದಿವಾಸಿ ಪಕ್ಷದ (ಬಿಎಪಿ) ಅಭ್ಯರ್ಥಿಯನ್ನು ಬೆಂಬಲಿಸಲು ತೀರ್ಮಾನಿಸಿತು.