‘ದೇಶದ ಸಂಪತ್ತನ್ನು ಸಮಾನವಾಗಿ ಹಂಚುತ್ತೇವೆ ಎಂದು ಕಾಂಗ್ರೆಸ್ನವರು ಹೇಳುತ್ತಿದ್ದಾರೆ. ಆದರೆ ಅವರಿಗೆ ಅಧಿಕಾರಕ್ಕೆ ಬರುವ ಶಕ್ತಿಯೇ ಇಲ್ಲ. ಮನಸ್ಸಿಗೆ ಬಂದಂತೆ ಮಾತಾಡುತ್ತಾರೆ. ದೇಶದ ಭೂಮಿ, ಸಂಪತ್ತನ್ನು ಹಂಚುತ್ತೇವೆ ಎಂದು ಪಕ್ಷದ ಮುಖಂಡ ರಾಹುಲ್ ಗಾಂಧಿ ಹೇಳುತ್ತಾರೆ. ಇಂತಹ ಹೇಳಿಕೆ ಎಷ್ಟು ಸರಿ’ ಎಂದು ಪ್ರಶ್ನಿಸಿದರು.