ಗುಲ್ಬರ್ಗ: ಮರಾಠಿ ಮಾಧ್ಯಮದ ಡಿ.ಎಡ್. ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಅನ್ಯಾಯ ಆಗಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಇಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಧರಣಿ ನಡೆಸಿದರು.
ಈ ಬಾರಿಯ ಪರೀಕ್ಷೆಗೆ ಹಾಜ ರಾಗಿದ್ದ ಗುಲ್ಬರ್ಗ, ಬೀದರ್ ಹಾಗೂ ಬೆಳಗಾವಿಯ ಮರಾಠಿ ಮಾಧ್ಯಮ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಲಾಗಿದೆ. ಈ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.