ADVERTISEMENT

ಕೃಷಿ ಯೋಜನೆಗಳ ಪ್ರಚಾರ ರಾಯಭಾರಿ ಅಕ್ಷಯ್‌ಕುಮಾರ್‌

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2017, 19:30 IST
Last Updated 6 ಡಿಸೆಂಬರ್ 2017, 19:30 IST
ಕೃಷಿ ಯೋಜನೆಗಳ ಪ್ರಚಾರ ರಾಯಭಾರಿ ಅಕ್ಷಯ್‌ಕುಮಾರ್‌
ಕೃಷಿ ಯೋಜನೆಗಳ ಪ್ರಚಾರ ರಾಯಭಾರಿ ಅಕ್ಷಯ್‌ಕುಮಾರ್‌   

ನವದೆಹಲಿ: ಕೇಂದ್ರ ಸರ್ಕಾರದ ಪ್ರಮುಖ ಕೃಷಿ ಯೋಜನೆಗಳ ಪ್ರಚಾರ ರಾಯಭಾರಿಯಾಗಿ ಬಾಲಿವುಡ್‌ ನಟ ಅಕ್ಷಯ್‌ಕುಮಾರ್‌ ಕಾರ್ಯನಿರ್ವಹಿಸಲಿದ್ದಾರೆ.

ಮಣ್ಣಿನ ಫಲವತ್ತತೆ ಪರೀಕ್ಷೆ, ಬೆಳೆ ವಿಮೆ ಯೋಜನೆಗಳ ಬಗ್ಗೆ ರೈತರಲ್ಲಿ ವ್ಯಾಪಕ ಅರಿವು ಮೂಡಿಸುವ ಟೆಲಿವಿಷನ್‌ ಕಾರ್ಯಕ್ರಮಗಳಲ್ಲಿ ಅಕ್ಷಯ್‌ಕುಮರ್‌ ಭಾಗವಹಿಸಲಿದ್ದಾರೆ. ಜತೆಗೆ ಪ್ರಧಾನ್‌ ಮಂತ್ರಿ ಬೆಳೆ ವಿಮಾ ಯೋಜನೆ, ಪರಂಪರಾಗತ ಕೃಷಿ ವಿಕಾಸ್‌ ಯೋಜನೆಗಳನ್ನೂ ಇವರು ಪ್ರಚುರಪಡಿಸಲಿದ್ದಾರೆ ಎಂದು ಕೃಷಿ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT