ADVERTISEMENT

ಕೆನರಾ ಬ್ಯಾಂಕ್‌ನಿಂದ ಎಂಎಸ್ಎಂಇ ಸಾಲಮೇಳ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2014, 19:30 IST
Last Updated 30 ಸೆಪ್ಟೆಂಬರ್ 2014, 19:30 IST

ಬೆಂಗಳೂರು: ಭಾರತೀಯ ಸಣ್ಣ ಮತ್ತು ಮಧ್ಯಮ ವ್ಯಾಪಾರ ಅಭಿವೃದ್ಧಿ ಸಂಸ್ಥೆಗಳ ಸಂಘಟನೆ ಇತ್ತೀಚೆಗೆ ಮುಂಬೈನಲ್ಲಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮ­ಗಳು(ಎಸ್‌ಎಂಇ) ಮತ್ತು ಬ್ಯಾಂಕಿಂಗ್‌ ಸಂಸ್ಥೆಗಳ ಸಮಾವೇಶ ಆಯೋಜಿ­ಸಿತ್ತು.

ಸಮಾವೇಶದಲ್ಲಿ ಮುಖ್ಯ ಅತಿಥಿಯಾ­ಗಿದ್ದ ಕೇಂದ್ರದ ಬೃಹತ್‌ ಕೈಗಾರಿಕೆಗಳು ಮತ್ತು ಸರ್ಕಾರಿ ಉದ್ಯಮ ಸಂಸ್ಥೆಗಳ ಸಚಿವ ಅನಂತ್‌ ಗೀತೆ ಅವರು ‘ವಿಶ್ವ ಎಸ್‌ಎಂಇ ವ್ಯಾಪಾರ ಕೇಂದ್ರ’ವನ್ನು ಉದ್ಘಾಟಿಸಿದರು.

ಇದೇ ವೇಳೆ, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೆನರಾ ಬ್ಯಾಂಕ್‌ ‘ಎಂಎಸ್‌ಎಂಇ ಪ್ರದ­ರ್ಶನ ಮತ್ತು ರಫ್ತುದಾರರಿಗೆ ಸಾಲ  ವಿತರಣೆ’ ಆಯೋಜಿಸಿತ್ತು.

ಕೆನರಾ ಬ್ಯಾಂಕ್‌ ಅಧ್ಯಕ್ಷ ಆರ್‌.ಕೆ.ದುಬೆ, ಎಸ್‌ಎಂಇ ಸಂಸ್ಥೆಗಳ ಸಂಘದ ಅಧ್ಯಕ್ಷ ಚಂದ್ರಕಾಂತ್‌ ಸಾಲುಂಕೆ ಮತ್ತಿತರರು ಸಮಾರಂಭದಲ್ಲಿದ್ದರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.