ADVERTISEMENT

ನೆರವು: ಬ್ಯಾಂಕ್‌ಗಳಿಗೆ ತಾಕೀತು

ಆರ್‌ಬಿಐ ಸಲಹೆ ಪಾಲಿಸುವಂತೆ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2015, 20:32 IST
Last Updated 24 ಏಪ್ರಿಲ್ 2015, 20:32 IST

ನವದೆಹಲಿ: ಅಕಾಲಿಕ ಮತ್ತು ಆಲಿಕಲ್ಲು ಮಳೆಯಿಂದಾಗಿ ಬೆಳೆ ಹಾನಿ ಅನುಭವಿಸಿ ರುವ ರೈತರಿಗೆ ತಕ್ಷಣ ನೆರವು ನೀಡುವಂತೆ ರಾಜ್ಯ ಸರ್ಕಾರಗಳು ಮತ್ತು ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ ಎಂದು ಹಣ ಕಾಸು ಖಾತೆ ರಾಜ್ಯ ಸಚಿವ ಜಯಂತ ಸಿನ್ಹಾ ಶುಕ್ರವಾರ ಲೋಕಸಭೆಗೆ  ತಿಳಿಸಿದರು.

ಸಂಕಷ್ಟಕ್ಕೆ ಒಳಗಾದ ರೈತರ ನೆರವಿಗೆ ಧಾವಿಸಲು ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಎಲ್ಲಾ ಬ್ಯಾಂಕುಗಳಿಗೆ ಆದೇಶ ನೀಡಿದೆ ಎಂದು ಅವರು ವಿವರಿಸಿದರು. ಭಾರತೀಯ ರಿಸರ್ವ್ ಬ್ಯಾಂಕ್‌ ಸಲಹೆ ಪಾಲಿಸುವಂತೆ ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿಗೆ (ಎಸ್‌ಎಲ್‌ಬಿಸಿ) ಸೂಚನೆ ನೀಡಲಾಗಿದೆ. ಪ್ರತಿ  ರೈತನಿಗೂ ನೆರವು ಸಿಗುವಂತೆ ನೋಡಿಕೊಳ್ಳಲು ರಾಜ್ಯಗಳಿಗೆ ತಿಳಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.