ದಾವೋಸ್: ಜಾಗತಿಕ ಮಾರುಕಟ್ಟೆಯಲ್ಲಿ ಮನೆಮಾಡಿರುವ ಅನಿಶ್ಚಿತ ವಾತಾವರಣದ ಹೊರತಾಗಿಯೂ ಬಂಡವಾಳ ಹೂಡಿಕೆಗೆ ಭಾರತ ಅತ್ಯಂತ ನೆಚ್ಚಿನ ತಾಣವಾಗಿದೆ ಎಂದು ಭಾರತದ ನಿಯೋಗ ಪ್ರತಿಪಾದಿಸಿದೆ.
ಇಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಂಡಿರುವ ಭಾರತದ ನಿಯೋಗವು ಬಂಡವಾಳ ತೊಡಗಿಸಲು ಇರುವ ಅವಕಾಶಗಳ ಕುರಿತು ಹೂಡಿಕೆದಾರರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದೆ. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ನಿರ್ಮಲಾ ಸೀತಾರಾಮನ್ ನೇತೃತ್ವದ ನೂರಕ್ಕೂ ಹೆಚ್ಚು ಉದ್ಯಮಿಗಳ ನಿಯೋಗ ಸಮಾವೇಶದಲ್ಲಿ ಭಾಗವಹಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.