ನವದೆಹಲಿ: ಸಂಸ್ಕರಿಸಿದ ಕೃಷಿ ಉತ್ಪನ್ನಗಳನ್ನು ‘ಸರಕು ವಹಿವಾಟು ತೆರಿಗೆಯಿಂದ’ (ಸಿಟಿಟಿ) ಹೊರಗಿಡುವಂತೆ ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.
ಕೃಷಿ ಉತ್ಪನ್ನಗಳನ್ನು ಸಿಟಿಟಿಯಿಂದ ಹೊರಗಿಡಲಾಗಿದೆ. ಹೀಗಿರುವಾಗ ಸಂಸ್ಕರಿಸಿದ ಉತ್ಪನ್ನಗಳಿಗೆ ತೆರಿಗೆ ವಿಧಿಸುವುದು ಸರಿಯಲ್ಲ ಎಂದು ಹೇಳಿದೆ.
‘ಸರಕುಗಳ ವಾಯಿದಾ ವಹಿವಾಟು ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸುವ ಮೂಲಕ ಪಾಲುದಾರರ ಹಿತರಕ್ಷಣೆ ಮಾಡುವಂತೆ’ ಸಿಐಐನ ಪ್ರಧಾನ ನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.