ADVERTISEMENT

ಲಿಂಗಪೂಜಾನುಷ್ಠಾನ ಮಂಗಲ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 14 ಜನವರಿ 2018, 10:06 IST
Last Updated 14 ಜನವರಿ 2018, 10:06 IST

ಅಕ್ಕಿಆಲೂರ: ಇಲ್ಲಿನ ಮುತ್ತಿನಕಂತಿಮಠದ ಲಿಂ.ವೀರರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಪುಣ್ಯಸ್ಮರಣೋತ್ಸವ ಹಾಗೂ ಧನುರ್ಮಾಸ ಲಿಂಗಪೂಜಾನುಷ್ಠಾನ ಮಂಗಲ ಮಹೋತ್ಸವದ ನಿಮಿತ್ತ ಪ್ರಮುಖ ಬೀದಿಗಳಲ್ಲಿ ಜಗದ್ಗುರು ರೇಣುಕಾಚಾರ್ಯರ ಹಾಗೂ ವೀರರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಭಾವಚಿತ್ರದ ಮೆರವಣಿಗೆ ಗುರುವಾರ ವಿಜೃಂಭಣೆಯಿಂದ ಜರುಗಿತು.

‌ಮುತ್ತಿನಕಂತಿಮಠ ಗುರುಪೀಠದಲ್ಲಿ ವಿಶೇಷ ಪೂಜೆಯೊಂದಿಗೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ತೆರೆದ ವಾಹದನದಲ್ಲಿ ರೇಣುಕಾಚಾರ್ಯರ ಮತ್ತು ಲಿಂ.ವೀರರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಭಾವಚಿತ್ರ ಇರಿಸಲಾಗಿತ್ತು. ಮೆರವಣಿಗೆ ಸಾಗಿದುದ್ದಕ್ಕೂ ಪ್ರತಿ ಮನೆಗಳ ಎದುರು ಮಹಿಳೆಯರು ಭಾವಚಿತ್ರಗಳಿಗೆ ಶ್ರದ್ಧೆಯಿಂದ ಆರತಿ ಬೆಳಗಿದರು.

ನೂರಾರು ಮಹಿಳೆಯರು ಮೆರವಣಿಗೆಯುದ್ದಕ್ಕೂ ಪೂರ್ಣಕುಂಭ ಹೊತ್ತು ಹೆಜ್ಜೆ ಹಾಕಿದರು. ವಿವಿಧ ವಾದ್ಯಗಳು ವೈಭವಕ್ಕೆ ಕಾರಣವಾದವು. ಮರಳಿ ಮೆರವಣಿಗೆ ಗುರುಪೀಠ ತಲುಪಿ ಮಂಗಲಗೊಂಡಿತು. ವಿವಿಧ ಮಠಾಧೀಶರು, ಸದ್ಭಕ್ತ ಮಂಡಳಿ ಸದಸ್ಯರು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.