ಮಾಲೂರು: ತಾಲ್ಲೂಕಿನ ತೊರಹಳ್ಳಿಯ ರೈತ ವೆಂಕಟರಮಣಪ್ಪ ಅವರ ಜಮೀನಿನಲ್ಲಿ ಇರುವ ಬತ್ತಿರುವ 900 ಅಡಿ ಆಳದ ಕೊಳವೆ ಬಾವಿಯಲ್ಲಿ ಮಂಗಳವಾರ ಕಿರೀಟದ ಮಾದರಿಯ ಲೋಹದ ವಸ್ತು ಗೋಚರವಾಗಿದೆ. ಗ್ರಾಮಸ್ಥರಲ್ಲಿ ಇದು ಕುತೂಹಲಕ್ಕೆ ಕಾರಣವಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇತ್ತೀಚೆಗೆ ಸುರಿದ ಮಳೆಯಿಂದ ಅಂತರ್ಜಲ ವೃದ್ಧಿಯಾಗಿದೆ. ಕೊಳವೆ ಬಾವಿಗೂ ನೀರು ಬಂದಿರಬಹುದು ಎನ್ನುವ ನಂಬಿಕೆಯಲ್ಲಿ ಸ್ಕ್ಯಾನಿಂಗ್ ತಂತ್ರಜ್ಞಾನದ ಮೂಲಕ ವೆಂಕಟರವಣಪ್ಪ ನೀರಿನ ಮಟ್ಟ ಪರೀಕ್ಷಿಸಲು ಮುಂದಾಗಿದ್ದರು. ಸ್ಕ್ಯಾನಿಂಗ್ನಲ್ಲಿ ಈ ಲೋಹ ಗೋಚರಿಸಿದೆ.
ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇವೆ. ಸ್ಕ್ಯಾನಿಂಗ್ ಚಿತ್ರಣ ವೀಕ್ಷಿಸಲಾಗುವುದು. ಒಂದು ವೇಳೆ ಇದು ಚಿನ್ನದ ಕಿರೀಟ ಎನ್ನುವುದು ದೃಢವಾದರೆ ಪುರಾತತ್ವ ಇಲಾಖೆಗೆ ಮಾಹಿತಿ ನೀಡುತ್ತೇವೆ ಎಂದು ತಹಶೀಲ್ದಾರ್ ಗಿರೀಶ್ ‘ಪ್ರಜಾವಾಣಿ’ ತಿಳಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.