ADVERTISEMENT

ಕೊಟ್ಟ ಮಾತಿನಂತೆ ಕಾಂಗ್ರೆಸ್ ನಡೆ: ಶಾಸಕ ಚಿಮ್ಮನಕಟ್ಟಿ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2017, 5:17 IST
Last Updated 7 ನವೆಂಬರ್ 2017, 5:17 IST

ಗುಳೇದಗುಡ್ಡ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಬಡವರಿಗೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಸಮಾಜದ ಕಟ್ಟ ಕಡೆಯ ಕುಟುಂಬಕ್ಕೂ ಯೋಜನೆಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದೆ’ ಎಂದು ಶಾಸಕ ಬಿ.ಬಿ. ಚಿಮ್ಮನಕಟ್ಟಿ ಹೇಳಿದರು.

‘ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮೊದಲು ರಾಜ್ಯದ ಬಡ ಜನರ ಕಲ್ಯಾಣಕ್ಕಾಗಿ ನೀಡಿದ ಸಾಕಷ್ಟು ಭರವಸೆಗಳನ್ನು ಈಡೇರಿಸಿದೆ. ನವಕರ್ನಾಟಕ ಕಟ್ಟುವ ಗುರಿ ಹೊಂದಿರುವ ಕಾಂಗ್ರೆಸ್ ಸರ್ಕಾರ. ನುಡಿದಂತೆ ನಡೆದುಕೊಂಡಿದೆ’ ಎಂದರು.

ಗುಳೇದಗುಡ್ಡ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ಕಾರ್ಯಕ್ರಮಕ್ಕೆ ಸಾಲೇಶ್ವರ ದೇವಸ್ಥಾನದ ಹತ್ತಿರ ಚಾಲನೆ ನೀಡಿ ಮಾತನಾಡಿದರು.

ADVERTISEMENT

ಕಟಿಗೇರಿ ಜಿಲ್ಲಾ ಪಂಚಾಯ್ತಿ ಸದಸ್ಯೆ ಸರಸ್ವತಿ ಪ್ರಕಾಶ ಮೇಟಿ, ಬಾದಾಮಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಣ್ಣ ಡಿ. ಯಲಿಗಾರ, ಅಲ್ಪಸಂಖ್ಯಾತರ ಬ್ಲಾಕ್ ಸಮಿತಿ ಅಧ್ಯಕ್ಷ ಎಂ. ಜಮೀರ್ ಮೌಲ್ವಿ, ಡಾ. ದೇವರಾಜ ಪಾಟೀಲ, ಎಸ್.ಡಿ. ಜೋಗಿನ, ಪುರಸಭೆ ಮಾಜಿ ಅಧ್ಯಕ್ಷ ರಾಜು ಜವಳಿ, ನಾಗಪ್ಪ ಗೌಡರ, ಮಹೇಶ ಹೊಸಗೌಡರ, ಡಾ, ಬಸವರಾಜ ಕೊಲ್ಹಾರ, ಪ್ರಕಾಶ ಮೇಟಿ, ವೈ.ಆರ್. ಹೆಬ್ಬಳ್ಳಿ, ರವಿ ಗೌಡರ, ಈಶ್ವರಪ್ಪ ರಾಜನಾಳ, ರಮೇಶ ಬೂದಿಹಾಳ, ಪ್ರಕಾಶ ಮುರಗೋಡ, ಸಂಗಪ್ಪ ಜವಳಿ, ಮುಬಾರಕ ಮಂಗಳೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.