ADVERTISEMENT

ನುಡಿದಂತೆ ನಡೆದಿದ್ದೇವೆ: ಸಚಿವ ತಿಮ್ಮಾಪುರ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2017, 7:16 IST
Last Updated 24 ಸೆಪ್ಟೆಂಬರ್ 2017, 7:16 IST

ಮುಧೋಳ:‘ಜನಪರವಾದ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಹಾಗೂ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವೈಫಲ್ಯವನ್ನು ಮತದಾರರಿಗೆ ವಿವರಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರಲು ಶ್ರಮಿಸಬೇಕು’ ಎಂದು ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

‘ವಿಧಾನಸಭೆ ಚುನಾವಣೆ ಭರ್ಜರಿ ಸಿದ್ಧತೆಯಲ್ಲಿ ಕಾಂಗ್ರೆಸ್ ಪಕ್ಷ ಮುಧೋಳ ನಗರ ಹಾಗೂ ತಾಲ್ಲೂಕಿನ ಹಳ್ಳಿಗಳಲ್ಲಿ ಇಂದಿನಿಂದ ಹದಿನೈದು ದಿನಗಳವರೆಗೆ ಮನೆ– ಮನೆಗೆ ಕಾಂಗ್ರೆಸ್ ಎಂಬ ಕಾರ್ಯಕ್ರಮಕ್ಕೆ ವಾರ್ಡ್ ನಂ.14 ರಲ್ಲಿ ಚಾಲನೆ ನೀಡಿ ಮಾತನಾಡಿದರು.

‘ಸಾಮಾಜಿಕ ನ್ಯಾಯ ಕಲ್ಪಿಸುವುದು ಸರ್ಕಾರದ ಪ್ರಥಮ ಆದ್ಯತೆ. ನೊಂದವರ ಬಡವರ ನೆರವಿಗೆ ನಿಂತಿರುವುದು ಮುಖ್ಯಮಂತ್ರಿ ಸಿದ್ರಾಮಯ್ಯನವರ ಸರ್ಕಾರವಾಗಿದೆ. ನುಡಿದಂತೆ ನಡೆಯುವ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ್ದೇವೆ’ ಎಂದು ಹೇಳಿದರು.

ADVERTISEMENT

ಕೆಪಿಸಿಸಿ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಪಾರಸ್ಮಾಲ ಜೈನ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ. ಸೌದಾಗರ, ಓ.ಬಿ.ಸಿ. ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಕಲಬುರ್ಗಿ, ಸೇವದಳ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಬಿ. ಗಸ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ನಾಯಿಕ, ವಾರ್ಡ ಸದಸ್ಯ ಯುನಿಸ್ ಕುಡಚಿ, ಉದಯಸಿಂಹ ಪಡತಾರೆ, ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಂತೇಶ ಉದಪುಡಿ, ನಗರಸಭೆ ಉಪಾಧ್ಯಕ್ಷ ಮಾರುತಿ ಬಂಡಿವಡ್ಡರ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.