ADVERTISEMENT

ಬಿಎಸ್‌ವೈ ಊಸರವಳ್ಳಿ, ಬಿಜೆಪಿ ಗೋಸುಂಬೆ ; ತಿಮ್ಮಾಪುರ ಲೇವಡಿ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2017, 5:09 IST
Last Updated 10 ನವೆಂಬರ್ 2017, 5:09 IST

ಬಾಗಲಕೋಟೆ: ‘ಕೆಜೆಪಿಯಲ್ಲಿದ್ದಾಗ ಯಡಿಯೂರಪ್ಪ ಅವರಿಗೆ ಟಿಪ್ಪು ಜಯಂತಿ ಬೇಕಿತ್ತು. ಈಗ ಬೇಡ ಎಂದರೆ ಹೇಗೆ’ ಎಂದು ಪ್ರಶ್ನಿಸಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ‘ಯಡಿಯೂರಪ್ಪ ಊಸರವಳ್ಳಿ. ರಾಜಕೀಯ ಲಾಭಕ್ಕಾಗಿ ಬಣ್ಣ ಬದಲಾಯಿಸುತ್ತಾರೆ’ ಎಂದು ಲೇವಡಿ ಮಾಡಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಜೆಪಿಯಲ್ಲಿದ್ದಾಗ ಟಿಪ್ಪು ವೇಷ ಹಾಕಿಕೊಂಡು ಖಡ್ಗ ಹಿಡಿದು ಫೋಸು ಕೊಟ್ಟಿದ್ದನ್ನು ಯಡಿಯೂರಪ್ಪ ನೆನಪು ಮಾಡಿಕೊಳ್ಳಲಿ’ ಎಂದರು.

‘ಅಂಬಾನಿ, ಅದಾನಿ ಜೊತೆ ಸೇರಿ ಪ್ರಧಾನಿ ನರೇಂದ್ರ ಮೋದಿ ದೇಶದ ಆರ್ಥಿಕತೆಯನ್ನು ಹಾಳು ಮಾಡಿದ್ದಾರೆ. ಕೆಲವೇ ಜನರ ಹಿತ ಕಾಪಾಡಲು ನೋಟು ರದ್ಧತಿಯ ನಿರ್ಧಾರ ಕೈಗೊಳ್ಳಲಾಯಿತು’ ಎಂದು ಟೀಕಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.