ಮುಧೋಳ: ‘ರಾಜ್ಯದಲ್ಲಿ ಜೆಡಿಎಸ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಜನತೆ ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಲಿ ಎಂದು ಬಯಸುತ್ತಿದ್ದಾರೆ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರವಿ ಹುಣಶ್ಯಾಳ ಹೇಳಿದರು.
ತಾಲ್ಲೂಕಿನ ಹಲಗಲಿ ಗ್ರಾಮದಲ್ಲಿ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರ ನಾಯಕ ಮಾತನಾಡಿ, ‘ಜನತೆಗೆ ಕಾಂಗ್ರೆಸ್ ಬಿಜೆಪಿ ದುರಾಡಳಿತದಿಂದ ಬೇಸತ್ತಿದ್ದಾರೆ. ಜೆಡಿಎಸ್ ಬಗ್ಗೆ ಭರವಸೆ ಮೂಡಿದೆ’ ಎಂದು ಹೇಳಿದರು.
ಮಹಿಳಾ ಘಟಕದ ಅಧ್ಯಕ್ಷೆ ಭುವನೇಶ್ವರಿ ಹಾದಿಮನಿ, ತಾಲ್ಲೂಕು ಕಾರ್ಯಾಧ್ಯಕ್ಷ ಜಾವೀದ್ ಗಲಗಲಿ, ಅತ್ತಾರ, ಇಲಾಯಿ, ಹನೀಫ್ ಮುಲ್ಲಾ, ಮುಲ್ಲು ಹೊಸಕೋಟಿ, ಪ್ರಭು ಶೆಟ್ಟರ, ಗುರುದೇವ ಹಿರೇಮಠ, ರಾಜುಗೌಡ ಪಾಟೀಲ, ಮಲ್ಲು ಹೊಸೂರ, ರವಿ ಕೋಮಾರ, ಶ್ರೀಕಾಂತ ಯಂಗಿ, ಯರಗಟ್ಟಿ ಹಣಮಂತ ಕಿವಡಿ, ನಾಗಪ್ಪ ಜೋಗಿ, ಜಿಲ್ಲಾ ರೈತ ಘಟಕ ಅಧ್ಯಕ್ಷ ಶಂಕರ ಜೀರಗಾಳ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.