ಬಾಗಲಕೋಟೆ: ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಇದೇ 24 ರಿಂದ 28ರವರೆಗೆ ವಿವಿಧ ತಾಲ್ಲೂಕು ಕೇಂದ್ರಗಳಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ 24 ರಂದು ಜಮಖಂಡಿ ನಿರೀಕ್ಷಣಾ ಮಂದಿರ, 25 ರಂದು ಮುಧೋಳದ ಲೋಕೋಪಯೋಗಿ ಇಲಾಖೆ ನಿರೀಕ್ಷಣಾ ಮಂದಿರ, 26 ರಂದು ಬಾದಾಮಿ ಲೋಕೋಪಯೋಗಿ ಇಲಾಖೆ ನಿರೀಕ್ಷಣಾ ಮಂದಿರ, 27 ರಂದು ಹುನಗುಂದದ ಲೋಕೋಪಯೋಗಿ ಇಲಾಖೆ ನಿರೀಕ್ಷಣಾ ಮಂದಿರ ಹಾಗೂ 28 ರಂದು ಬೀಳಗಿ ಜಿ.ಎಲ್.ಬಿ.ಸಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 1.30 ವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಮಾಹಿತಿಗೆ ದೂ: 08354– 236170, 236200 ಸಂಪರ್ಕಿಸಲು ಕೋರಿದೆ.