ADVERTISEMENT

ಇತಿಹಾಸ ನಿರ್ಮಿಸಲಿರುವ ಕಾಂಗ್ರೆಸ್: ಬಿ.ವಿ.ಶಿವಯೋಗಿ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2017, 9:08 IST
Last Updated 11 ಡಿಸೆಂಬರ್ 2017, 9:08 IST

ಹೊಳಲು: ಹೂವಿನಹಡಗಲಿಗೆ ಇದೇ 18ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಕೊಡಲಿರುವ ನಿಮಿತ್ತ ಕಾಂಗ್ರೆಸ್‌ ಕಾರ್ಯಕರ್ತರ ಪೂರ್ವಭಾವಿ ಸಭೆ ಭಾನುವಾರ ಸಂಜೆ ಇಲ್ಲಿ ನಡೆಯಿತು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ಶಿವಯೋಗಿ ಮಾತನಾಡಿ, ‘ಹೂವಿನಹಡಗಲಿ ಕ್ಷೇತ್ರದಲ್ಲಿ ಯಾರೂ ಎರಡು ಸಲ ಗೆದ್ದಿರುವ ಉದಾಹರಣೆ ಇಲ್ಲ. ಈ ಬಾರಿ ಪಿ.ಟಿ. ಪರಮೇಶ್ವರ ನಾಯ್ಕ ಅವರನ್ನು ಗೆಲ್ಲಿಸಿ ಕಾಂಗ್ರೆಸ್‌ ಇತಿಹಾಸ ನಿರ್ಮಿಸಲಿದೆ’ ಎಂದು ಹೇಳಿದರು.

ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಮಾತನಾಡಿ, ‘ಎಂ.ಪಿ. ಪ್ರಕಾಶ್‌ ಅವರು ನನ್ನನ್ನು ಗುರುತಿಸಿ ಹಡಗಲಿ ಕ್ಷೇತ್ರಕ್ಕೆ ಕರೆ ತಂದರು. ಅವರ ಆಶಯದಂತೆ ಕೆಲಸ ನಿರ್ವಹಿಸುತ್ತಿದ್ದೇನೆ’ ಎಂದು ತಿಳಿಸಿದರು.

ADVERTISEMENT

ಎಂ.ಪರಮೇಶ್ವರಪ್ಪ, ಇಐಗೋಳ ಚಿದಾನಂದ, ಆರ್.ಹನುಮಂತಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.