ADVERTISEMENT

ಪದವೀಧರ ಕ್ಷೇತ್ರದ ಚುನಾವಣೆ ಮುಂದೂಡಲು ಕಾಂಗ್ರೆಸ್‌ ಮುಖಂಡರ ಮನವಿ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2017, 6:32 IST
Last Updated 20 ನವೆಂಬರ್ 2017, 6:32 IST
ಪದವೀಧರ ಕ್ಷೇತ್ರದ ಚುನಾವಣೆ ಮುಂದೂಡಲು ಕಾಂಗ್ರೆಸ್‌ ಮುಖಂಡರ ಮನವಿ
ಪದವೀಧರ ಕ್ಷೇತ್ರದ ಚುನಾವಣೆ ಮುಂದೂಡಲು ಕಾಂಗ್ರೆಸ್‌ ಮುಖಂಡರ ಮನವಿ   

ಬಳ್ಳಾರಿ: ವಿಧಾನ ಪರಿಷತ್ತಿಗೆ ಪದವೀಧರ ಕ್ಷೇತ್ರದ ಚುನಾವಣೆಯನ್ನು ಕನಿಷ್ಠ ಮೂರು ತಿಂಗಳು ಮುಂದೂಡಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸ್ಪರ್ಧಾಕಾಂಕ್ಷಿ ಕಾಂಗ್ರೆಸ್ ಮುಖಂಡರಾದ ಎಚ್.ಎಂ.ಮಹೇಶ್ವರಯ್ಯ ಸ್ವಾಮಿ ಹಾಗೂ ಮಹ್ಮದ್ ಗೌಸ್ ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿರುವುದರಿಂದ ಹೊಸ ಪದವೀಧರರ ಸೇರ್ಪಡೆಗೆ ಹೆಚ್ಚಿನ ‌ಕಾಲಾವಕಾಶ ಬೇಕಾಗಿದೆ ಎಂದು‌ ನಗರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಜನವರಿ ಆರಂಭದಲ್ಲೇ ಅಭ್ಯರ್ಥಿಯನ್ನು ಘೋಷಿಸಬೇಕು. ಬಳ್ಳಾರಿಯ ಆಕಾಂಕ್ಷಿಗಳಿಗೆ ಆದ್ಯತೆ ನೀಡಬೇಕು ಎಂದು ಪಕ್ಷದ ಹೈಕಮಾಂಡ್ ಗಮನ ಸೆಳೆಯಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.