ADVERTISEMENT

ಬಳ್ಳಾರಿ ತಾಲ್ಲೂಕು ಕೊಳಗಲ್ಲು: ವ್ಯಕ್ತಿಯ ಬರ್ಬರ ಕೊಲೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2017, 5:26 IST
Last Updated 25 ಮಾರ್ಚ್ 2017, 5:26 IST
ಬಳ್ಳಾರಿ ತಾಲ್ಲೂಕು ಕೊಳಗಲ್ಲು: ವ್ಯಕ್ತಿಯ ಬರ್ಬರ ಕೊಲೆ
ಬಳ್ಳಾರಿ ತಾಲ್ಲೂಕು ಕೊಳಗಲ್ಲು: ವ್ಯಕ್ತಿಯ ಬರ್ಬರ ಕೊಲೆ   

ಬಳ್ಳಾರಿ: ತಾಲ್ಲೂಕಿನ ಕೊಳಗಲ್ಲು ಗ್ರಾಮದಲ್ಲಿ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ.

ಶಿವರಾಂ (35) ಕೊಲೆಯಾದ ವ್ಯಕ್ತಿ. ಆರೋಪಿಯನ್ನು ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಿನ ಜಾವ ಘಟನೆ ನಡೆದಿದ್ದು, ಗ್ರಾಮದ ಶಾಲೆಯ ಆವರಣದಲ್ಲಿ ಶವ ದೊರೆತಿದೆ. ಗ್ರಾಮಸ್ಥರಲ್ಲಿ ಕುತೂಹಲ ಕೆರಳಿಸಿದೆ.

ADVERTISEMENT

ತನ್ನ ಅಕ್ಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಕಾರಣಕ್ಕೆ ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.