ಹೂವಿನಹಡಗಲಿ : ‘ಹಲವು ಜನಪರ ಯೋಜನೆಗಳ ಅನುಷ್ಠಾನ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಿದೆ. ಎಲ್ಲ ವರ್ಗದ ಜನರ ವಿಶ್ವಾಸ ಗಳಿಸಿರುವ ಕಾರಣ 2018ರಲ್ಲಿಯೂ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ’ ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣನಾಯ್ಕ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಯುವ ಕಾಂಗ್ರೆಸ್ನಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬರುವ ಸಾರ್ವತ್ರಿಕ ಚುನಾವಣೆ ಯಲ್ಲಿ ಯುವಕರು ನಿರ್ಣಾ ಯಕ ಪಾತ್ರ ವಹಿಸಲಿದ್ದಾರೆ. ಕೆಳ ಹಂತದ ಕಾರ್ಯ ಕರ್ತರಿಗೂ ಪಕ್ಷದಲ್ಲಿ ಸ್ಥಾನಮಾನ ಕಲ್ಪಿಸಿ ಕೊಡಬೇಕು ಎಂಬುದು ರಾಹುಲ್ ಗಾಂಧಿಯವರ ಆಶಯ ಎಂದರು.
ರಾಜ್ಯ ಯುವ ಕಾಂಗ್ರೆಸ್ ಸಂಘಟನೆ ಗಾಗಿ ಹೈ.ಕ. ಭಾಗದ ತಮನ್ನು ಗುರುತಿಸಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಯುವಕರನ್ನು ಸಂಘಟಿಸಿ ಪಕ್ಷ ವರ್ಚಸ್ಸು ಹೆಚ್ಚಿಸುವ ಕೆಲಸ ಮಾಡುವುದಾಗಿ ಹೇಳಿದರು. ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಗಡಿಗಿ ಕೃಷ್ಣ, ಉಪಾಧ್ಯಕ್ಷ ಎನ್.ಫಾರೂಕ್, ಲಕ್ಷ್ಮ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.