ಹೊಸಪೇಟೆ: ಶ್ರಾವಣ ಮಾಸದ ಎರಡನೇ ಸೋಮವಾರ ತಾಲ್ಲೂಕಿನ ಹಂಪಿಯಲ್ಲಿ ವಿರೂಪಾಕ್ಷೇಶ್ವರ ದೇವಸ್ಥಾನದ ವಿರೂಪಾಕ್ಷನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಹಂಪಿ ವಿದ್ಯಾರಣ್ಯ ಸ್ವಾಮೀಜಿ ಅವರು ಅಭಿಷೇಕ ಮಾಡಿ, ಹೂವಿನಿಂದ ಅಲಂಕರಿಸಿ, ಆರತಿ ಬೆಳಗಿ ಪೂಜೆ ಸಲ್ಲಿಸಿದರು. ವಿವಿಧ ಕಡೆಗಳಿಂದ ಬಂದಿದ್ದ ಜನ ತುಂಗಭದ್ರಾ ನದಿಯಲ್ಲಿ ಮಿಂದೆದ್ದು, ವಿರೂಪಾಕ್ಷನ ದರ್ಶನ ಪಡೆದರು.
ನೆರೆಯ ಕೊಪ್ಪಳ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಗದಗ ಸೇರಿದಂತೆ ಇತರೆ ಕಡೆಗಳಿಂದ ಜನ ಬಂದಿದ್ದರು. ದಿನವಿಡೀ ದೇಗುಲದ ಆವರಣದಲ್ಲಿ ಜನಜಾತ್ರೆ ಇತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.