ADVERTISEMENT

ಒಂಟಿ ಸಲಗ ದಾಳಿ: ನಾಲ್ವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2017, 4:19 IST
Last Updated 19 ನವೆಂಬರ್ 2017, 4:19 IST
ಶಿವನಹಳ್ಳಿ ಬಳಿ ಒಂಟಿ ಸಲಗ ದಾಳಿ ನಡೆಸಿತು
ಶಿವನಹಳ್ಳಿ ಬಳಿ ಒಂಟಿ ಸಲಗ ದಾಳಿ ನಡೆಸಿತು   

ಆನೇಕಲ್‌: ತಾಲ್ಲೂಕಿನ ಗಡಿಭಾಗ ತಮಿಳುನಾಡಿನ ಥಳಿ ಸಮೀಪದ ಶಿವನಹಳ್ಳಿ ಬಳಿ ಒಂಟಿ ಸಲಗವೊಂದು ದಾಳಿ ನಡೆಸಿದ್ದರಿಂದ ಅರಣ್ಯ ಇಲಾಖೆಯ ಮೂರು ಮಂದಿ ಸಿಬ್ಬಂದಿ ಸೇರಿದಂತೆ ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಬಳಿಕ ದು ಮೇಯುತ್ತಿದ್ದ ದನಗಳ ಮೇಲೆ ದಾಳಿ ನಡೆಸಿದ್ದರಿಂದ ಹಸುವೊಂದು ಮೃತಪಟ್ಟಿತು.

ಕಾಡಿನಿಂದ ಹೊರಬಂದ ಒಂಟಿ ಸಲಗವು ಶಿವನಹಳ್ಳಿ ಬಳಿ ರೈತರು ಬೆಳೆದಿದ್ದ ರಾಗಿಬೆಳೆ ನಾಶಗೊಳಿಸಿತು. ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯರು ಒಂಟಿ ಸಲಗವನ್ನು ಕಾಡಿಗೆ ಓಡಿಸಲು ಹರಸಾಹಸ ಮಾಡಿದರು.

ಆಗ ಅದು ಮೂರು ಮಂದಿ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಒಬ್ಬ ಸ್ಥಳೀಯ ವ್ಯಕ್ತಿಯ ಮೇಲೆ ದಾಳಿ ನಡೆಸಿತು. ಗಾಯಾಳುಗಳು ಥಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.