ADVERTISEMENT

‘ಸಾಮಾಜಿಕ ನ್ಯಾಯದಡಿ ಪಕ್ಷದಲ್ಲಿ ಸ್ಥಾನಮಾನ’

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2017, 7:29 IST
Last Updated 24 ಸೆಪ್ಟೆಂಬರ್ 2017, 7:29 IST
‘ಸಾಮಾಜಿಕ ನ್ಯಾಯದಡಿ ಪಕ್ಷದಲ್ಲಿ ಸ್ಥಾನಮಾನ’
‘ಸಾಮಾಜಿಕ ನ್ಯಾಯದಡಿ ಪಕ್ಷದಲ್ಲಿ ಸ್ಥಾನಮಾನ’   

ದೇವನಹಳ್ಳಿ: ಶತಮಾನಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ನ್ಯಾಯದಡಿ ಸೂಕ್ತ ಸ್ಥಾನಮಾನ ನೀಡಲಾಗುತ್ತಿದೆ’ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಚಿನ್ನಪ್ಪ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ವಿಜಯಪುರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗೊಡ್ಲು ಮುದ್ದೇನಹಳ್ಳಿ ಮುನಿರಾಜುಗೆ ನೇಮಕ ಆದೇಶ ಪತ್ರ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

2018ರ ವಿಧಾನಸಭಾ ಚುನಾವಣೆಯನ್ನು ಪಕ್ಷ ಪ್ರತಿಷ್ಠೆಯಾಗಿ ಸ್ವೀಕರಿಸಿದೆ. ಪಕ್ಷದಲ್ಲಿ ಅನೇಕ ವರ್ಷಗಳಿಂದ ದುಡಿಯುತ್ತಿರುವ ಪ್ರತಿಯೊಂದು ಸಮುದಾಯಕ್ಕೆ ವಿವಿಧ ಘಟಕಗಳಲ್ಲಿ ಸೂಕ್ತ ಸ್ಥಾನಮಾನ ನೀಡುತ್ತಿದೆ ಎಂದರು.

ADVERTISEMENT

ಕಾಂಗ್ರೆಸ್ ಮುಖಂಡ ಚೇತನ್ ಗೌಡ ಮಾತನಾಡಿದರು.

ನೂತನ ಪ್ರಧಾನ ಕಾರ್ಯದರ್ಶಿ ಮುನಿರಾಜು ಮಾತನಾಡಿ, ಮುಖಂಡರ ಸಲಹೆ, ಮಾರ್ಗದರ್ಶನದ ಮೇರೆಗೆ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದರು.

ವಿಜಯಪುರ ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕ ಅಧ್ಯಕ್ಷ ಮುದಗುರ್ಕಿ ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ವೆಂಕಟೇಶ್, ಮಂಜುನಾಥ್, ಚೈತ್ರ ವೀರೆಗೌಡ, ಅನ್ನಪೂರ್ಣಮ್ಮ, ಚಂದ್ರಪ್ಪ, ಶಶಿಕಲಾ ಆನಂದ್, ಮುಖಂಡ ನಾರಾಯಣಸ್ವಾಮಿ, ನಾಗರಾಜು, ಎನ್.ವೆಂಕಟೇಶ, ಮುನಿಯಪ್ಪ, ಮುನಿರತ್ನಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.