ADVERTISEMENT

ಗೋವಾ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2017, 6:17 IST
Last Updated 19 ಏಪ್ರಿಲ್ 2017, 6:17 IST

ಬೆಂಗಳೂರು: ಗೋವಾದಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಲಂಬಾಣಿಗಳಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

‘ಗೋವಾದ ಸಂಸ್ಕೃತಿಗೆ ಲಂಬಾಣಿ ಗಳು ಸರಿಹೊಂದುವುದಿಲ್ಲ ಎಂದು ನಿಮ್ಮ ಸರ್ಕಾರದ ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ. ಇದು ತಪ್ಪು ಸಂದೇಶ ರವಾ ನಿಸುತ್ತದೆ. ವೈವಿಧ್ಯದಲ್ಲೂ ಏಕತೆಯಿಂದ ಬದುಕುವುದು ಭಾರತೀಯ ಸಂಸ್ಕೃತಿ ಎಂಬುದನ್ನು ನೀವೂ ಒಪ್ಪುತ್ತೀರಿ’ ಎಂದು ಪತ್ರದಲ್ಲಿ ಹೇಳಿದ್ದಾರೆ.
‘ಕರ್ನಾಟಕದ ಬೇರೆ ಬೇರೆ ಭಾಗ ಗಳಿಂದ ಬಂದು ಗೋವಾದಲ್ಲಿ ನೆಲೆಸಿ ರುವ ಲಂಬಾಣಿಗಳು ಗೌರವ ಮತ್ತು ಹೆಮ್ಮೆಯಿಂದ ಜೀವನ ಸಾಗಿಸುತ್ತಿದ್ದಾರೆ.

ಲ್ಲದೆ, ಆ ರಾಜ್ಯದ ಆರ್ಥಿಕ ಅಭಿ ವೃದ್ಧಿಗೂ ಕೊಡುಗೆ ನೀಡಿದ್ದಾರೆ’ ಎಂದು ಅವರು ವಿವರಿಸಿದ್ದಾರೆ. ನಿಮ್ಮ ಸಚಿವರಿಗೆ ಸಂಯಮದಿಂದ ಹೇಳಿಕೆ ನೀಡುವಂತೆ ಸೂಚಿಸಬೇಕೆಂದು ಮನವಿ ಮಾಡುತ್ತೇನೆ. ಈ ಬಗ್ಗೆ ಸಚಿವ ಆರ್‌.ವಿ. ದೇಶಪಾಂಡೆ ತಮ್ಮನ್ನು ಭೇಟಿ ಮಾಡಲಿದ್ದಾರೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.