ADVERTISEMENT

ಗೋವಿನಜೋಳಕ್ಕೆ ಬೆಂಬಲ ಬೆಲೆ ನೀಡಿ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2017, 6:56 IST
Last Updated 29 ನವೆಂಬರ್ 2017, 6:56 IST

ಬೈಲಹೊಂಗಲ: ಗೋವಿನಜೋಳಕ್ಕೆ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಕೃಷಿಕ ಸಮಾಜ ಸಂಘಟನೆ ಪದಾಧಿಕಾರಿಗಳು ಉಪವಿಭಾಗಧಿಕಾರಿ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಿದರು.

‘ಕೇಂದ್ರ ಸರ್ಕಾರವು ಗೋವಿನಜೋಳಕ್ಕೆ ಬೆಂಬಲ ಬೆಲೆ ನಿಗದಿಪಡಿಸಿದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಖರೀದಿ ಕೇಂದ್ರ ತೆರೆಯದೆ ರೈತರಿಗೆ ಅನ್ಯಾಯ ಮಾಡಿದೆ. ರಾಜ್ಯಪಾಲರು ಮಧ್ಯಪ್ರವೇಶಿಸಿ ಹೆಚ್ಚು ಗೋವಿನಜೋಳ ಬೆಳೆಯುವ ತಾಲ್ಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ತೆರೆಯುವಂತೆ ಆದೇಶಿಸಬೇಕು’ ಎಂದು ಒತ್ತಾಯಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಮಹಾಂತೇಶ ಕಮತ ಮಾತನಾಡಿ, ‘ಐದು ವರ್ಷಗಳಿಂದ ಸರಿಯಾಗಿ ಮಳೆ ಬೀಳದೆ ಪ್ರಕೃತಿ ವಿಕೋಪದಿಂದ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ. ಗೋವಿನಜೋಳಕ್ಕೆ ₹ 1,450  ಬೆಂಬಲೆ ಬೆಲೆ ಘೋಷಿಸಿದೆ. ರಾಜ್ಯ ಸರ್ಕಾರ ಅದಕ್ಕೆ ಪ್ರೋತ್ಸಾಹಧನ ನೀಡಿ ಖರೀದಿಸಬೇಕು. ಇಲ್ಲವಾದರೆ ತೀವ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಜಿಲ್ಲಾ ಘಟಕದ ಅಧ್ಯಕ್ಷ ಈರಪ್ಪ ಹುಬ್ಬಳ್ಳಿ, ಉಪಾಧ್ಯಕ್ಷ ಸೋಮಲಿಂಗಪ್ಪ ಕೋಟಗಿ, ಕಾರ್ಯದರ್ಶಿ ಶಂಕರಗೌಡ ಪಾಟೀಲ, ಮುಖಂಡರಾದ ರಮೇಶ ತೋಟಗಿ, ಸುರೇಶ ಹೋಳಿ, ಮುಗನಗೌಡ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.