ಬೆಳಗಾವಿ: ಚಿಕ್ಕೋಡಿ ಜಿಲ್ಲಾ ರಚನೆಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಉಪವಾಸ ನಿರತವಾಗಿದ್ದ ಮುಖಂಡ ಎಸ್.ವೈ. ಅಂಜಿ ಅವರು ಭಾನುವಾರ ಅಸ್ವಸ್ಥರಾಗಿದ್ದಾರೆ.
ಅವರಿಗೆ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಸ್.ವೈ. ಹಂಜಿ ಅವರು ಸಾಹಿತಿಯೂ ಹೌದು.
ಚಿಕ್ಕೋಡಿಯನ್ನು ಜಿಲ್ಲಾ ಕೇಂದ್ರ ಮಾಡಬೇಕು ಎಂದು ಆಗ್ರಹಿಸಿ ಅಲ್ಲಿ ನಡೆಯುತ್ತಿರುವ ಹೋರಾಟ 21ನೇ ದಿನಕ್ಕೆ ಕಾಲಿಟ್ಟಿದೆ. ಸರದಿ ಉಪವಾಸ ಸತ್ಯಾಗ್ರಹ 6ನೇ ದಿನಕ್ಕೆ ಕಾಲಿಟ್ಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.