ADVERTISEMENT

ನ್ಯಾಯಸಮ್ಮತ ಚುನಾವಣೆಗೆ ಕ್ರಮ: ನೂತನ ಪೊಲೀಸ್ ಆಯುಕ್ತ ಎಂ. ಚಂದ್ರಶೇಖರ್

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2018, 5:08 IST
Last Updated 27 ಏಪ್ರಿಲ್ 2018, 5:08 IST
ನೂತನ ಪೊಲೀಸ್ ಆಯುಕ್ತರಾಗಿ ಎಂ. ಚಂದ್ರಶೇಖರ್ ಅಧಿಕಾರ ಸ್ವೀಕರಿಸಿದರು.
ನೂತನ ಪೊಲೀಸ್ ಆಯುಕ್ತರಾಗಿ ಎಂ. ಚಂದ್ರಶೇಖರ್ ಅಧಿಕಾರ ಸ್ವೀಕರಿಸಿದರು.   

ಬೆಳಗಾವಿ: ನೂತನ ಪೊಲೀಸ್ ಆಯುಕ್ತರಾಗಿ ಎಂ. ಚಂದ್ರಶೇಖರ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಅವರು, ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಐಜಿಪಿ ಅಲೋಕ್ ಕುಮಾರ್ ಅವರಿಗೆ ಕಾರಾಗೃಹದ ಕೈದಿಯೊಬ್ಬ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು. ಜೈಲಿನೊಳಗೆ ಮೊಬೈಲ್ ಬಂದಿದ್ದು ಹೇಗೆ ಎನ್ನುವ ಕುರಿತೂ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.