ಬೆಳಗಾವಿ: ನಗರದ ಗೋವಾವೇಸ್ ಜಕ್ಕೇರಿಹೊಂಡದಲ್ಲಿರುವ ರವೀಂದ್ರ ನಾಥ ಠಾಗೋರ ಪದವಿ-ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
‘ವಿದ್ಯಾರ್ಥಿಗಳು ನಿರಂತರ ಅಧ್ಯಯನ, ಸತತ ಪ್ರಯತ್ನದೊಂದಿಗೆ ಗುರುಗಳ ಮಾರ್ಗದರ್ಶನ ಪಡೆದರೆ ಪರೀಕ್ಷೆಯಲ್ಲಿ ಒಳ್ಳೆಯ ಅಂಕಗಳನ್ನು ಗಳಿಸಬಹುದು. ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು’ ಎಂದು ನಾಯ್ಕರ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ಸಿ.ಎನ್. ನಾಯ್ಕರ ಅಭಿಪ್ರಾಯ ಪಟ್ಟರು.
‘ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಸೌಲಭ್ಯಗಳನ್ನು ಒದಗಿಸ ಲಾಗುವುದು’ ಎಂದು ಭರವಸೆ ನೀಡಿದರು. ವಿದ್ಯಾರ್ಥಿನಿಯರಾದ ಮನುಜಾ ವೆರ್ಣೇಕರ, ಮಿಸಬಾ ಬಾಬನ್ನವರ, ಶ್ರದ್ಧಾ ಮುಂಗುರಕರ, ಶ್ರೀಲಾ ಪಾಟೀಲ, ಅಕ್ಷತಾ ಬೊಂಗಾಳೆ ಮತು ಸಮೀಕ್ಷಾ ಅನಗೋಳಕರ ಅವರನ್ನು ಸತ್ಕರಿಸ ಲಾಯಿತು. ಮಾಜಿ ಶಾಸಕ ಶ್ಯಾಮ ಘಾಟಗೆ, ನಾಯ್ಕರ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಶ್ವೇತಾ ಸಿ. ನಾಯ್ಕರ, ಪ್ರಾಂಶುಪಾಲ ಪಿ.ಜಿ.ಬಿ. ರಿಬ್ಜನಕುಮಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.