ADVERTISEMENT

ಬೆಳಗಾವಿಯಲ್ಲಿ ಕಾರಿಗೆ ಬೆಂಕಿ: 6 ಜನ ಪ್ರಾಣಾಪಾಯದಿಂದ ಪಾರು

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2018, 6:19 IST
Last Updated 22 ಮಾರ್ಚ್ 2018, 6:19 IST
ಬೆಳಗಾವಿಯಲ್ಲಿ ಕಾರಿಗೆ ಬೆಂಕಿ: 6 ಜನ ಪ್ರಾಣಾಪಾಯದಿಂದ ಪಾರು
ಬೆಳಗಾವಿಯಲ್ಲಿ ಕಾರಿಗೆ ಬೆಂಕಿ: 6 ಜನ ಪ್ರಾಣಾಪಾಯದಿಂದ ಪಾರು   

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕಾರಿನಲ್ಲಿದ್ದವರು ಕೂಡಲೇ ಕೆಳಗೆ ಇಳಿದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಹಾರಾಷ್ಟ್ರದ ಪರಶುರಾಮ ಕಾಗಲಕರ ಎನ್ನುವವರಿಗೆ ಸೇರಿದ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತವಾಗುವುದನ್ನು ತಪ್ಪಿಸಿದರು.

ಕಡೇಬಜಾರ್ ಠಾಣೆ ಪೊಲೀಸರು ಕಾರನ್ನು ಅಲ್ಲಿಂದ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ADVERTISEMENT

ತಾಂತ್ರಿಕ ಕಾರಣದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.