ADVERTISEMENT

‘ಬೆಳಗಾವಿ ಜಿಲ್ಲೆ ವಿಭಜನೆ ಬೇಡ: ಸಿಎಂಗೆ ಮನವಿ’

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2017, 7:20 IST
Last Updated 24 ಡಿಸೆಂಬರ್ 2017, 7:20 IST
ಬೆಳಗಾವಿ ಜಿಲ್ಲಾ ವಿಭಜನೆ ವಿರೋಧಿ ಹೊರಾಟ ಸಮಿತಿ ಸದಸ್ಯರು ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬೆಳಗಾವಿ ಜಿಲ್ಲಾ ವಿಭಜನೆ ವಿರೋಧಿ ಹೊರಾಟ ಸಮಿತಿ ಸದಸ್ಯರು ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.   

ಬೈಲಹೊಂಗಲ: ‘ಅಖಂಡ ಬೆಳಗಾವಿ ಜಿಲ್ಲೆ ವಿಭಜನೆ ಈಗ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ. ಆಡಳಿತಾತ್ಮಕ ದೃಷ್ಠಿಯಿಂದ ವಿಭಜನೆ ಅನಿವಾರ್ಯವಾದಲ್ಲಿ ಜಿಲ್ಲೆಯ ಮಠಾಧೀಶರು, ಎಲ್ಲ ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತಿರ್ಮಾಣ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಟ್ಟಣದ ಬೆಳಗಾವಿ ಜಿಲ್ಲಾ ವಿಭಜನಾ ವಿರೋಧಿ ಹೋರಾಟ ಸಮಿತಿ ಸದಸ್ಯರು ಶಾಸಕ ಡಾ.ವಿಶ್ವನಾಥ ಪಾಟೀಲ, ಕಾಂಗ್ರೆಸ್‌ ಮುಖಂಡ ಮಹಾಂತೇಶ ಕೌಜಲಗಿ ನೇತೃತ್ವದಲ್ಲಿ ಬೆಳಗಾವಿ ಪ್ರವಾಸಿ ಮಂದಿರಲ್ಲಿ ಭೇಟಿ ನೀಡಿ, ಮನವಿ ಸಲ್ಲಿಸಿದ ಮುಖಂಡರನ್ನು ಉದ್ಧೇಶಿಸಿ ಅವರು ಮಾತನಾಡಿದರು. ‘ಬೆಳಗಾವಿ ಗಡಿ ಪ್ರದೇಶವಾಗಿದ್ದರಿಂದ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳುವದಿಲ್ಲ. ಜನತೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು’ ಎಂದರು.

ಶಾಖಾ ಮೂರುಸಾವಿರಮಠದ ಪ್ರಭು ನೀಲಕಂಠ ಸ್ವಾಮೀಜಿ, ಮುನವಳ್ಳಿ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಸರ್ಕಾರ ಜಿಲ್ಲಾ ವಿಭಜನೆ ಮಾಡುತ್ತಿರುವ ವಿಷಯ ಜನರ ನಿತ್ಯದ ಚರ್ಚೆಯ ವಿಷಯವಾಗಿದೆ. ಜಿಲ್ಲಾ ವಿಭಜನೆಯಿಂದ ಗಡಿ ಪ್ರದೇಶದಲ್ಲಿ ಭಾಷೆಯ ವಿಷಯದ ಕುರಿತು ಶಾಂತಿ ಕದಡುವ ವಾತಾವರಣ ನಿರ್ಮಾಣವಾಗಲಿದೆ. ಜಿಲ್ಲೆ ವಿಭಜನೆ ಬೇಡ ಎಂದು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

ADVERTISEMENT

ಒಂದು ವೇಳೆ ಜಿಲ್ಲೆ ವಿಭಜಿಸುವದಾದರೆ ಮೊದಲಿನಿಂದಲೂ ಉಪವಿಭಾಗವಾಗಿ ಐದು ತಾಲ್ಲೂಕುಗಳಿಗೆ ಕೇಂದ್ರ ಸ್ಥಾನದಲ್ಲಿರುವ, ಎಲ್ಲ ಇಲಾಖೆಗಳನ್ನು ಹೊಂದಿರುವ ಬೈಲಹೊಂಗಲವನ್ನು ಜಿಲ್ಲೆಯಾಗಿ ಮಾಡಬೇಕು’ ಎಂದು ಒತ್ತಾಯಿಸಿದರು.

ಮುಖಂಡ ಶಿವರಂಜನ ಬೋಳಣ್ಣವರ, ಸಿ.ಕೆ. ಮೆಕ್ಕೇದ, ಕಿರಣ ಸಾಧುನವರ, ಮಹಾಂತೇಶ ತುರಮರಿ, ಶಂಕರ ಮಾಡಲಗಿ, ಬಸವರಾಜ ಜನ್ಮಟ್ಟಿ, ಬಸವರಾಜ ಕೌಜಲಗಿ, ಗುರು ಮೆಟಗುಡ್ಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.