ಬೆಳಗಾವಿ: ಇಲ್ಲಿನ ಶಹಾಪುರದ ಅಳವನಗಲ್ಲಿ ಕಾರ್ನರ್ನಲ್ಲಿ ರಸ್ತೆಯ ಮೇಲೆ ಪೆಂಡಾಲ್ ಹಾಕಿದ ವಿಚಾರವಾಗಿ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಪ್ರಕ್ಷುಬ್ಧ ಗೊಂಡಿದ್ದ ಆ ಸ್ಥಳದಲ್ಲಿ ಭಾನುವಾರ ಬೆಳಿಗ್ಗೆ ಜನಜೀವನ ಎಂದಿನಂತೆ ಇದೆ.
ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.
ಕಾಮತ್ ಗಲ್ಲಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಆಟೊರಿಕ್ಷಾ ಗಾಜನ್ನು ದುಷ್ಕರ್ಮಿಗಳು ಒಡೆದಿದ್ದಾರೆ. ಘಟನೆಗೆ ಖಚಿತ ಕಾರಣ ತಿಳಿದುಬಂದಿಲ್ಲ.
ಕಿಡಗೇಡಿಗಳ ಬಂಧನಕ್ಕೆ ಆಗ್ರಹ
ಭಾನುವಾರ ರಾತ್ರಿ ನಗರದ ಶಹಾಪುರದ ಅಳವನ ಗಲ್ಲಿಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೂಡಲೇ ಕಿಡಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸ್ಥಳೀಯರು ಮಾಜಿ ಶಾಸಕ ಅಭಯ ಪಾಟೀಲ ನೇತ್ರತ್ವದಲ್ಲಿ ಶಹಾಪುರ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.
ಕಲ್ಲು ತೂರಾಟ ನಡೆಸಿ ಶಾಂತಿ ಭಂಗ ಮಾಡಿದ ಆರೋಪಿಗಳನ್ನು ಬಂಧಿಸದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಠಾಣೆ ಎದುರಿನ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದಾಗಿ ಸಂಚಾರಕ್ಕೆ ತೊಂದರೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.