ಬೆಂಗಳೂರು: ಮೈಸೂರು ರಸ್ತೆಯ ರಾಜರಾಜೇಶ್ವರಿನಗರದಲ್ಲಿ ಚಾಲಕನೊಬ್ಬ ಕಾರನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಶನಿವಾರ ರಾತ್ರಿ ಈ ಅವಘಡ ಸಂಭವಿಸಿದೆ. ಚಾಲಕನನ್ನು ವಶಕ್ಕೆ ಪಡೆದಿದ್ದೇವೆ ಎಂದು ಕೆಂಗೇರಿ ಸಂಚಾರ ಪೊಲೀಸರು ತಿಳಿಸಿದರು.
ಲಾರಿ ಗುದ್ದಿ ಕಾರ್ಮಿಕ ಸಾವು: ಕೊತ್ತನೂರು ಬಳಿ ಶನಿವಾರ ರಾತ್ರಿ ಲಾರಿ ಗುದ್ದಿದ್ದರಿಂದ ಕಾರ್ಮಿಕ ಯಲ್ಲಾಲಿಂಗ ಎಂಬುವರು ಮೃತಪಟ್ಟಿದ್ದಾರೆ. ಯಾದಗಿರಿಯ ಅವರು ಕೆಲಸಕ್ಕಾಗಿ ನಗರಕ್ಕೆ ಬಂದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.