ADVERTISEMENT

ಅಡ್ಡಾದಿಡ್ಡಿ ಕಾರು ಚಾಲನೆ; ಆರು ಮಂದಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2018, 19:36 IST
Last Updated 24 ಮಾರ್ಚ್ 2018, 19:36 IST

ಬೆಂಗಳೂರು: ಮೈಸೂರು ರಸ್ತೆಯ ರಾಜರಾಜೇಶ್ವರಿನಗರದಲ್ಲಿ ಚಾಲಕನೊಬ್ಬ ಕಾರನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ಶನಿವಾರ ರಾತ್ರಿ ಈ ಅವಘಡ ಸಂಭವಿಸಿದೆ. ಚಾಲಕನನ್ನು ವಶಕ್ಕೆ ಪಡೆದಿದ್ದೇವೆ ಎಂದು ಕೆಂಗೇರಿ ಸಂಚಾರ ಪೊಲೀಸರು ತಿಳಿಸಿದರು.

ಲಾರಿ ಗುದ್ದಿ ಕಾರ್ಮಿಕ ಸಾವು: ಕೊತ್ತನೂರು ಬಳಿ ಶನಿವಾರ ರಾತ್ರಿ ಲಾರಿ ಗುದ್ದಿದ್ದರಿಂದ ಕಾರ್ಮಿಕ ಯಲ್ಲಾಲಿಂಗ ಎಂಬುವರು ಮೃತಪಟ್ಟಿದ್ದಾರೆ. ಯಾದಗಿರಿಯ ಅವರು ಕೆಲಸಕ್ಕಾಗಿ ನಗರಕ್ಕೆ ಬಂದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.