ADVERTISEMENT

ಅಧ್ಯಕ್ಷೆ ಸ್ಥಾನಕ್ಕೆ ಅನ್ನಪೂರ್ಣಮ್ಮಆಯ್ಕೆ

ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯ್ತಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2014, 20:17 IST
Last Updated 1 ಆಗಸ್ಟ್ 2014, 20:17 IST

ಯಲಹಂಕ: ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಅನ್ನಪೂರ್ಣಮ್ಮ ವೀರ­ಭದ್ರಯ್ಯ ಹಾಗೂ ಉಪಾಧ್ಯಕ್ಷರಾಗಿ ಗುರುಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನ­ಕ್ಕಾಗಿ ಶುಕ್ರವಾರ ನಡೆದ ಆಯ್ಕೆ ಪ್ರಕ್ರಿ­ಯೆಯಲ್ಲಿ ಬಿಜೆಪಿ ಮತ್ತು ಜೆಡಿ(ಎಸ್‌) ಬೆಂಬಲಿತ ಅಭ್ಯರ್ಥಿಗಳಾಗಿ ರಾಜಾನು­ಕುಂಟೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರದ ಸದಸ್ಯೆ ಅನ್ನಪೂರ್ಣಮ್ಮ ಹಾಗೂ ಬಂಡಿಕೊಡಿಗೇಹಳ್ಳಿ ತಾಲ್ಲೂಕು ಪಂಚಾಯ್ತಿ ಕ್ಷೇತ್ರದ ಸದಸ್ಯ ಗುರು­ಮೂರ್ತಿ ನಾಮಪತ್ರ ಸಲ್ಲಿಸಿದ್ದರು. ಬೆಂಗಳೂರು ಉತ್ತರ ವಿಭಾಗಾಧಿ­ಕಾರಿ ಮಹೇಶ್‌ಬಾಬು ಚುನಾವಣಾ­ಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.