ಬೆಂಗಳೂರು: ‘ಅರ್ಕಾವತಿ ಬಡಾವಣೆಯಲ್ಲಿ ಮೂಲ ಸೌಕರ್ಯ ಕಲ್ಪಿಸುವ ಸಿವಿಲ್ ಕಾಮಗಾರಿಗಳನ್ನು ಶೀಘ್ರವೇ ಆರಂಭಿಸುತ್ತೇವೆ’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ವಿಧಾನಪರಿಷತ್ತಿನಲ್ಲಿ ಗುರುವಾರ ಬಿಜೆಪಿಯ ರಾಮಚಂದ್ರಗೌಡ ಪ್ರಶ್ನೆಗೆ ಉತ್ತರಿಸಿ ಅವರು ಈ ವಿಷಯ ತಿಳಿಸಿದರು.
‘ಟೆಂಡರ್ ನೀಡಿಕೆ ಸಂಬಂಧ ನ್ಯಾಯಾಲಯದಲ್ಲಿ ಇದ್ದ ತಡೆಯಾಜ್ಞೆ ತೆರವು ಆಗಿದೆ. ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಈಗ ಯಾವುದೇ ಅಡ್ಡಿ ಇಲ್ಲ. ಕಾಮಗಾರಿ ವೆಚ್ಚ ₹ 201 ಕೋಟಿ ಆಗಲಿದೆ’ ಎಂದು ಹೇಳಿದರು.