ಅರ್ಜಿ ಆಹ್ವಾನ
ಡಿಪ್ಲೊಮಾ, ಪದವಿ ಹಾಗೂ ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ದುರ್ಬಲರಾಗಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯ ಅಪೇಕ್ಷಿಸುವ ವಿದ್ಯಾರ್ಥಿಗಳು ಅರ್ಜಿಯ ಜೊತೆ ಫಲಿತಾಂಶದ ವಿವರಗಳನ್ನು ಸಲ್ಲಿಸಬೇಕು. ಜೂನ್ 15 ಅರ್ಜಿ ಸಲ್ಲಿಸಲು ಕೊನೆ ದಿನ ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಸಂಪರ್ಕ–08023641814
ಸಾಂಸ್ಕೃತಿಕ ಸ್ಪರ್ಧೆ
ರಂಗಶ್ರೀ ಕಲಾ ಸಂಸ್ಥೆಯು ತನ್ನ 35ನೇ ವಾರ್ಷಿಕೋತ್ಸವದ ಅಂಗವಾಗಿ ಜುಲೈ 17ರಿಂದ 25ರವರೆಗೆ ರಾಜ್ಯಮಟ್ಟದ ನಾಟಕ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ.
ದಯಾನಂದ ಸಾಗರ್ ಅವರ ಸ್ಮರಣಾರ್ಥ ನಡೆಸುತ್ತಿರುವ ಈ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತ ತಂಡಗಳಿಗೆ 12 ಸಾವಿರ (ಪ್ರಥಮ), 10 ಸಾವಿರ (ದ್ವಿತೀಯ) ಹಾಗೂ 8 ಸಾವಿರ (ತೃತಿಯ) ನಗದು ಬಹುಮಾನ ನೀಡಲಾಗುವುದು. ಆಸಕ್ತರು ಜೂನ್ 30ರೊಳಗೆ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಸಂಪರ್ಕ–9945374803
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.