ADVERTISEMENT

ಅರ್ಜಿ ಹಿಂದಕ್ಕೆ ಪಡೆದ ರಾಘವೇಶ್ವರ ಶ್ರೀಗಳು

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2016, 20:04 IST
Last Updated 24 ಆಗಸ್ಟ್ 2016, 20:04 IST
ರಾಘವೇಶ್ವರ ಶ್ರೀ
ರಾಘವೇಶ್ವರ ಶ್ರೀ   

ಬೆಂಗಳೂರು: ರಾಮಕಥಾ ಗಾಯಕಿ ಪ್ರೇಮಲತಾ ಶಾಸ್ತ್ರಿ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ವೈದ್ಯಕೀಯ ಪರೀಕ್ಷೆಗೆ ಒಳಪಡಲು ಪೊಲೀಸರು ನೀಡಿದ್ದ ನೋಟಿಸ್‌ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ರಾಘವೇಶ್ವರ ಶ್ರೀಗಳು ಹಿಂದಕ್ಕೆ ಪಡೆದಿದ್ದಾರೆ.

ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರ ಏಕಸದಸ್ಯ ನ್ಯಾಯಪೀಠದ ಎದುರು ಬುಧವಾರ ಅರ್ಜಿ ವಿಚಾರಣೆಗೆ ಬಂದಾಗ ರಾಘವೇಶ್ವರ ಶ್ರೀಗಳ ಪರ ವಕೀಲರು, ಅರ್ಜಿ ಹಿಂದಕ್ಕೆ ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಭಾಗೀಯ ಪೀಠವು ಮುಖ್ಯ ಅರ್ಜಿಯನ್ನು ವಿಲೇವಾರಿ ಮಾಡಿದೆ. ಆದ್ದರಿಂದ ಈ ಅರ್ಜಿ ವಿಚಾರಣೆ ನಡೆಸುವುದು ಸೂಕ್ತವಲ್ಲ.

  ಅವಶ್ಯಕತೆ ಬಿದ್ದರೆ ಪುನಃ ಅರ್ಜಿ ಸಲ್ಲಿಸುವ ಅವಕಾಶವನ್ನು ಮುಕ್ತವಾಗಿರಿಸಬೇಕು ಮತ್ತು ಈ ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡಬೇಕು ಎಂದು ರಾಘವೇಶ್ವರ ಶ್ರೀಗಳ ಪರ ವಕೀಲರು ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ಪೀಠವು ಅರ್ಜಿ ಹಿಂಪಡೆಯಲು ಅನುಮತಿ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.