ADVERTISEMENT

ಅಲ್ಪಸಂಖ್ಯಾತ ಸಮುದಾಯದ ಸಚಿವರು, ಶಾಸಕರ ಸಭೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2016, 19:30 IST
Last Updated 20 ಅಕ್ಟೋಬರ್ 2016, 19:30 IST

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ವಿಧಾನಸಭೆ ಮತ್ತು ವಿಧಾನ ಪರಿಷತ್‌ ಸದಸ್ಯರು ಗುರುವಾರ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು.

ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಗಳಿಗೆ ಕಾಂಗ್ರೆಸ್‌ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಒದಗಿಸುವ ಸಂಬಂಧ ಚರ್ಚಿಸಲು ಈ ಸಭೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಸಭೆಯಲ್ಲಿ ಸಚಿವರಾದ ಆರ್‌. ರೋಷನ್‌ ಬೇಗ್‌, ತನ್ವೀರ್‌ ಸೇಠ್‌, ಶಾಸಕ ರಹೀಂ ಖಾನ್‌, ವಿಧಾನ ಪರಿಷತ್‌ ಸದಸ್ಯ ರಿಜ್ವಾನ್‌ ಆರ್ಷದ್‌ ಭಾಗವಹಿಸಿದ್ದರು. ಜೆಡಿಎಸ್‌ ಶಾಸಕ ಸೈಯದ್‌ ಮುದಿರ್‌ ಆಗಾ ಸಭೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.