ಬೆಂಗಳೂರು: ಜ್ಞಾನಭಾರತಿ ಠಾಣೆಯ ವ್ಯಾಪ್ತಿಯ ಮುನೇಶ್ವರನಗರ ಮುಖ್ಯರಸ್ತೆಯಲ್ಲಿ ನೆಲೆಸಿರುವ ಆದಾಯ ತೆರಿಗೆ ಅಧಿಕಾರಿ ನಿರಂಜನ್ ಅವರ ಪುತ್ರ ಶರತ್ (19) ಎಂಬಾತನನ್ನು ದುಷ್ಕರ್ಮಿಗಳು ಅಪಹರಿಸಿದ್ದು, ₹ 50 ಲಕ್ಷಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.
ನಿರಂಜನ್ ಅವರು ಇತ್ತೀಚೆಗೆ ಮಗನಿಗೆ ರಾಯಲ್ ಎನ್ಫೀಲ್ಡ್ ಬೈಕ್ ಕೊಡಿಸಿದ್ದರು. ಸ್ನೇಹಿತರ ಜತೆ ಬೈಕ್ನಲ್ಲಿ ಸುತ್ತಾಡಿ ಬರುವುದಾಗಿ ಹೇಳಿ ಹೋಗಿದ್ದ ಆತ ರಾತ್ರಿಯಾದರೂ ಹಿಂದಿರುಗಿರಲಿಲ್ಲ.
ಆತಂಕಗೊಂಡ ಪೋಷಕರು ಸಂಬಂಧಿಕರು ಹಾಗೂ ಶರತ್ನ ಸ್ನೇಹಿತರ ಮನೆಗಳಲ್ಲಿ ಹುಡುಕಾಡಿದ್ದಾರೆ. ಮಗ ಪತ್ತೆಯಾಗಿರಲಿಲ್ಲ. ಕೆಲಹೊತ್ತಿನಲ್ಲಿ ನಿರಂಜನ್ ಅವರಿಗೆ ಕರೆ ಮಾಡಿದ ದುಷ್ಕರ್ಮಿ ‘ನಿಮ್ಮ ಮಗನನ್ನು ಅಪಹರಿಸಿದ್ದೇವೆ. ₹ 50 ಲಕ್ಷ ಹಣ ನೀಡಿದರೆ ಅವನನ್ನು ಬಿಟ್ಟು ಕಳುಹಿಸುತ್ತೇವೆ’ ಎಂದಿದ್ದಾರೆ. ಜತೆಗೆ ಶರತ್ನನ್ನು ಕೂಡಿಹಾಕಿದ ವಿಡಿಯೊವನ್ನು ಚಿತ್ರೀಕರಿಸಿ ನಿರಂಜನ್ ಅವರ ಮೊಬೈಲ್ಗೆ ಕಳುಹಿಸಿದ್ದಾರೆ.
‘ಅಪ್ಪ ತುಂಬಾ ತೊಂದರೆ ಕೊಡುತ್ತಿದ್ದಾರೆ. ₹ 50 ಲಕ್ಷ ಹಣ ಕೊಟ್ಟರೆ ನನ್ನನ್ನು ಬಿಡುತ್ತಾರೆ. ದಯವಿಟ್ಟು ಅವರಿಗೆ ಹಣ ತಂದುಕೊಡಿ’ ಎಂದು ವಿಡಿಯೋದಲ್ಲಿ ಶರತ್ ಹೇಳಿದ್ದಾನೆ. ಅಪಹರಣಕಾರರು ವಿಡಿಯೊ ಕಳುಹಿಸಿದ ಮೊಬೈಲ್ ಸಂಖ್ಯೆಯ ಕರೆಗಳ ವಿವರಗಳನ್ನು (ಸಿಡಿಆರ್) ಆಧರಿಸಿ ತನಿಖೆ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.