ಬೆಂಗಳೂರು: ಆದಾಯ ತೆರಿಗೆ ವಿವರ ಸಲ್ಲಿಕೆಗೆ ಇದೇ, ಗುರುವಾರ (ಜುಲೈ 31) ಕೊನೆ ದಿನವಾಗಿದ್ದು, ಪಾವತಿದಾರರ ಅನುಕೂಲಕ್ಕಾಗಿ ಆದಾಯ ತೆರಿಗೆ ಇಲಾಖೆಯು ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ 80ಕ್ಕೂ ಅಧಿಕ ವಿಶೇಷ ಕೌಂಟರ್ಗಳನ್ನು ಆರಂಭಿಸುತ್ತಿದೆ.
ಮಂಗಳವಾರದಿಂದ (ಜುಲೈ 29) ಗುರುವಾರದವರೆಗೆ ಕಾರ್ಯನಿರ್ವಹಿಸುವ ಈ ವಿಶೇಷ ಕೌಂಟರ್ಗಳಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 5 ಗಂಟೆವರೆಗೆ ಆದಾಯ ತೆರಿಗೆ ವಿವರ ಸಲ್ಲಿಸಲು ಅವಕಾಶವಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಿ, ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳು, ಬ್ಯಾಂಕ್, ಖಾಸಗಿ ವಲಯಗಳ ವೇತನದಾರರು ಹಾಗೂ ಪಿಂಚಣಿದಾರರು ವಿಶೇಷ ಕೌಂಟರ್ಗಳಲ್ಲಿ ಆದಾಯ ತೆರಿಗೆ ವಿವರ ಸಲ್ಲಿಸಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.