ADVERTISEMENT

ಏ.30ರಿಂದ ಸಂಗೀತೋತ್ಸವ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2014, 19:30 IST
Last Updated 24 ಏಪ್ರಿಲ್ 2014, 19:30 IST

ಬೆಂಗಳೂರು: ‘ತ್ಯಾಗರಾಜ ಗಾನಸಭಾ ಟ್ರಸ್ಟ್‌ ವತಿಯಿಂದ ಶಂಕರ ಜಯಂತಿ ಮತ್ತು 43ನೇ ವರ್ಷದ ಸಂಗೀತೋ­ತ್ಸವ ಕಾರ್ಯಕ್ರಮವನ್ನು ಏ.30­ರಿಂದ ಮೇ 4ರವರೆಗೆ ಹಮ್ಮಿಕೊಳ್ಳ­ಲಾಗಿದೆ’  ಎಂದು ಟ್ರಸ್ಟ್‌ನ ಕಾರ್ಯದರ್ಶಿ ಬಿ.ಕೆ.ಚಂದ್ರಮೌಳಿ ಅವರು ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜಾಜಿ­ನಗರದ ವಾಣಿ ವಿದ್ಯಾ ಕೇಂದ್ರದಲ್ಲಿ  ಕಾರ್ಯಕ್ರಮ ನಡೆಯಲಿದೆ. ಸಂಗೀತೋತ್ಸವದ  ಅಧ್ಯಕ್ಷತೆಯನ್ನು ವಿದುಷಿ ಡಾ.ನಾಗವಲ್ಲಿ ನಾಗರಾಜ್ ವಹಿಸಲಿದ್ದಾರೆ’ ಎಂದು ತಿಳಿಸಿದರು.

‘ಕಾರ್ಯಕ್ರಮದಲ್ಲಿ ನಾಡಿನ ವಿವಿಧಕಲಾ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ವಿದ್ವಾಂಸರು ಮತ್ತು ಸಂಘಟಕರನ್ನು ಸನ್ಮಾನಿಸ ಲಾಗುವುದು’ ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ   ಟ್ರಸ್ಟ್‌ನ ಅಧ್ಯಕ್ಷ ಎಂ. ಅನಂತ್, ಸಹಕಾರ್ಯದರ್ಶಿ ಬಿ.ಕೆ. ಅನಂತರಾಮ್‌್ ಮೊದಲಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.