ADVERTISEMENT

ಒಂಬತ್ತು ದಿನಗಳ ಬಳಿಕ ನಿಂಗಮ್ಮ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2017, 19:55 IST
Last Updated 22 ಅಕ್ಟೋಬರ್ 2017, 19:55 IST
ಒಂಬತ್ತು ದಿನಗಳ ಬಳಿಕ ನಿಂಗಮ್ಮ ಶವ ಪತ್ತೆ
ಒಂಬತ್ತು ದಿನಗಳ ಬಳಿಕ ನಿಂಗಮ್ಮ ಶವ ಪತ್ತೆ   

ಬೆಂಗಳೂರು: ಕುರುಬರಹಳ್ಳಿಯ ಜೆ.ಸಿ.ನಗರದ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ನಿಂಗಮ್ಮ ಅವರ ಶವ ಒಂಬತ್ತು ದಿನಗಳ ಬಳಿಕ ಜ್ಞಾನಭಾರತಿ ಸಮೀಪದ ವೃಷಭಾವತಿ ಕಾಲುವೆಯಲ್ಲಿ ಭಾನುವಾರ ಪತ್ತೆಯಾಯಿತು.

ಇದೇ 13ರಂದು ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನಿಂಗಮ್ಮ ಹಾಗೂ ಅವರ ಪುತ್ರಿ ಪುಷ್ಪಾ ಕೊಚ್ಚಿ ಹೋಗಿದ್ದರು. ಪುಷ್ಪಾ ಶವ ಕುಂಬಳಗೋಡು ಸೇತುವೆ ಬಳಿ ಇದೇ 16ರಂದು ಪತ್ತೆಯಾಗಿತ್ತು. ನಿಂಗಮ್ಮ ಅವರಿಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು (ಎನ್‌ಡಿಆರ್‌ಎಫ್‌) 41 ಕಿ.ಮೀ. ಶೋಧ ಕಾರ್ಯ ನಡೆಸಿತ್ತು. ಕಾಲುವೆಯ ಆಳ ಇರುವ ಪ್ರದೇಶಗಳಲ್ಲಿ ಶವ ಸಿಕ್ಕಿಕೊಂಡಿರಬಹುದು ಎಂದು ಶಂಕಿಸಿದ ಎನ್‌ಡಿಆರ್‌ಎಫ್‌ ತಂಡ, 22 ಸ್ಥಳಗಳನ್ನು ಗುರುತಿಸಿ ಶೋಧ ಕಾರ್ಯ ಮುಂದುವರಿಸಿತ್ತು.

₹5 ಲಕ್ಷ ಪರಿಹಾರ ವಿತರಣೆ:

ADVERTISEMENT

ಸಿ.ವಿ.ರಾಮನ್‌ನಗರದ ಕೃಷ್ಣಪ್ಪ ಗಾರ್ಡನ್‌ನ ಕೊಳೆಗೇರಿಯಲ್ಲಿ ಮೃತಪಟ್ಟಿದ್ದ ನರಸಮ್ಮ (18) ಅವರ ಕುಟುಂಬದ ಸದಸ್ಯರಿಗೆ ₹5 ಲಕ್ಷ ಪರಿಹಾರವನ್ನು ಮೇಯರ್‌ ಆರ್‌.ಸಂಪತ್‌ ರಾಜ್‌ ಭಾನುವಾರ ವಿತರಿಸಿದರು.

ನರಸಮ್ಮ ಬಯಲು ಶೌಚಕ್ಕೆ ಹೋಗಿ ರಾಜಕಾಲುವೆಗೆ ಬಿದ್ದು ಇದೇ 15ರಂದು ಮೃತಪಟ್ಟಿದ್ದರು.

ಕೊಳೆಗೇರಿಯಲ್ಲಿ ಶೌಚಾಲಯ ನಿರ್ಮಿಸುವಂತೆ ಸ್ಥಳೀಯರು ಮನವಿ ಮಾಡಿದರು. ‘ಶೀಘ್ರದಲ್ಲೇ ಅದನ್ನು ಕಟ್ಟಿಸಿಕೊಡುತ್ತೇವೆ’ ಎಂದು ಮೇಯರ್‌ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.