ADVERTISEMENT

ಕಗ್ಗಲಿಪುರ: ಕಾಂಕ್ರೀಟ್‌ ರಸ್ತೆಗೆ ಗುದ್ದಲಿ ಪೂಜೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2016, 19:41 IST
Last Updated 28 ಆಗಸ್ಟ್ 2016, 19:41 IST

ಬೆಂಗಳೂರು: ‘ಗ್ರಾಮೀಣ ಪ್ರದೇಶದ  ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ನನ್ನ ಕ್ಷೇತ್ರದಲ್ಲೂ ಈ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ’  ಎಂದು ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಕಗ್ಗಲಿಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ಚತುಷ್ಪಥ ಕಾಂಕ್ರೀಟ್‌ ರಸ್ತೆ  ಕಾಮಗಾರಿಗೆ ಭಾನುವಾರ  ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಎಸ್.ಫರ್ವೇಜ್‌ ಮಾತನಾಡಿ, ‘ಒಳಚರಂಡಿ ಅಭಿವೃದ್ಧಿ, ಶಾಲಾ ಕಾಲೇಜುಗಳಿಗೆ ಮೂಲಸೌಕರ್ಯ  ಒದಗಿಸುವ ಕಾರ್ಯಗಳನ್ನೂ ಆದ್ಯತೆ ಮೇರೆಗೆ ಕೈಗೊಳ್ಳಲಾಗುವುದು’ ಎಂದರು. 

ತಾಲ್ಲೂಕು ಪಂಚಾಯ್ತಿ ಸದಸ್ಯ ಮಹದೇವ್, ಗ್ರಾಮ ಪಂಚಾಯಿತಿ ಸದಸ್ಯರಾದ ಪಟೇಲ್ ಕೃಷ್ಣಪ್ಪ, ಪ್ರಕಾಶ್, ಜಗದೀಶ್, ಶ್ರೀನಿವಾಸ್  ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.