ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಅವರ ಪತ್ನಿ ವಿದ್ಯಾ ಹಂಡಿಬಾಗ್ಗೆ ಅನುಕಂಪದ ಆಧಾರದ ಮೇಲೆ ಉಪ ನೋಂದಣಾಧಿಕಾರಿ ಹುದ್ದೆ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ವಿದ್ಯಾ ಅವರಿಗೆ ಸೋಮವಾರ ನೇಮಕಾತಿ ಆದೇಶ ಪತ್ರ ನೀಡಿದರು. ವಿದ್ಯಾ ಕಲ್ಲಪ್ಪ ಹಂಡಿಬಾಗ್ ಅವರಿಗೆ ಬೈಲಹೊಂಗಲದಲ್ಲಿ ಹುದ್ದೆ ನೀಡಲಾಗಿದ್ದು, ಅಲ್ಲಿ ಒಂದು ವರ್ಷ ತರಬೇತಿ ಪಡೆಯಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.