ADVERTISEMENT

‘ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಿ’

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2017, 19:43 IST
Last Updated 20 ನವೆಂಬರ್ 2017, 19:43 IST
ಆರ್‌.ಸಂಪತ್‌ ರಾಜ್‌ ಅವರಿಗೆ ಮನವಿ ನೀಡಿದ ಮಕ್ಕಳು
ಆರ್‌.ಸಂಪತ್‌ ರಾಜ್‌ ಅವರಿಗೆ ಮನವಿ ನೀಡಿದ ಮಕ್ಕಳು   

ಬೆಂಗಳೂರು: ವಿಶ್ವ ಮಕ್ಕಳ ದಿನದ ಪ್ರಯುಕ್ತ ಮೇಯರ್‌ ಆರ್‌.ಸಂಪತ್‌ ರಾಜ್‌ ಅವರು ನಾಗವಾರ, ಕಗ್ಗದಾಸನಪುರ ಹಾಗೂ ಕೃಷ್ಣಪ್ಪ ಬಡಾವಣೆಯ ಮಕ್ಕಳೊಂದಿಗೆ ಸೋಮವಾರ ಚರ್ಚೆ ನಡೆಸಿದರು.

‘ಬಡಾವಣೆಯಲ್ಲಿ ಕುಡಿಯಲು ನೀರಿಲ್ಲ. ಶೌಚಾಲಯ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದೇವೆ. ನಮ್ಮ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ’ ಎಂದು ಮಕ್ಕಳು ಅಳಲು ತೋಡಿಕೊಂಡರು.

ಇದಕ್ಕೆ ಸ್ಪಂದಿಸಿದ ಮೇಯರ್‌, ‘ಈ ಮೂರು ಪ್ರದೇಶಗಳಿಗೆ ಇದೇ 26ರಂದು ಭೇಟಿ ನೀಡಿ ಪರಿಶೀಲಿಸುತ್ತೇನೆ’ ಎಂದು ಭರವಸೆ ನೀಡಿದರು.
ಈ ಪ್ರದೇಶಗಳಲ್ಲಿರುವ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮೇಯರ್ ಸೂಚಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.