ADVERTISEMENT

ಕುಮಾರಸ್ವಾಮಿ ವಿರುದ್ಧ ಅಪಪ್ರಚಾರ: ದೂರು

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2017, 4:15 IST
Last Updated 23 ಸೆಪ್ಟೆಂಬರ್ 2017, 4:15 IST
ಕುಮಾರಸ್ವಾಮಿ
ಕುಮಾರಸ್ವಾಮಿ   

ಬೆಂಗಳೂರು: ‘ನರೇಂದ್ರ ಮೋದಿ ಫ್ಯಾನ್ಸ್ ಫ್ರಂ ಕರುನಾಡು’ ಫೇಸ್ ಬುಕ್ ಪೇಜ್‌ನಲ್ಲಿ ಸುಶ್ಮಿತಾ ಸಪ್ತರ್ಷಿ ಎಂಬ ಮಹಿಳೆ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಬಗ್ಗೆ ಅಪಪ್ರಚಾರ ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಎಚ್‌.ಎಂ. ರಮೇಶಗೌಡ ನಗರ ಪೊಲೀಸ್ ಆಯುಕ್ತರಿಗೆ ಶುಕ್ರವಾರ ದೂರು ನೀಡಿದ್ದಾರೆ.

‘ಕುಮಾರಸ್ವಾಮಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸುಶ್ಮಿತಾ ಸಪ್ತರ್ಷಿ ಹೇಳಿಕೆ ನೀಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇವರು ಆರೋಪಿಸಿರುವಂತೆ ನಮ್ಮ ಪಕ್ಷದ ಯಾರೊಬ್ಬರೂ ಬೇರೆ ಪಕ್ಷದವರ ವಿರುದ್ಧ ಅವಹೇಳನಕಾರಿ ವಿಡಿಯೊ ಹರಿಬಿಟ್ಟಿಲ್ಲ’ ಎಂದು ಅವರು ಸ್ಪಷ್ಟ‍ಪಡಿಸಿದ್ದಾರೆ.

ಸುಳ್ಳು ಆರೋಪ ಮಾಡಿ ಜನರ ದಿಕ್ಕು ತಪ್ಪಿಸುತ್ತಿರುವ ಸುಶ್ಮಿತಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅವರು ಸೃಷ್ಟಿಸಿರುವ ‘ನರೇಂದ್ರ ಮೇದಿ ಫಾನ್ಸ್ ಫ್ರಂ ಕರುನಾಡು’ ಪೇಜ್ ಅಳಿಸಬೇಕು ಎಂದೂ ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.