ADVERTISEMENT

ಕೆಪಿಸಿಎಲ್‌ನಿಂದ ಸರ್ಕಾರಕ್ಕೆ ₹ 43 ಕೋಟಿ ಲಾಭಾಂಶ ವಿತರಣೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2016, 19:50 IST
Last Updated 20 ಅಕ್ಟೋಬರ್ 2016, 19:50 IST
ಲಾಭಾಂಶ ಮೊತ್ತದ ಚೆಕ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಪಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಕುಮಾರನಾಯಕ ಅವರು ಗುರುವಾರ ಹಸ್ತಾಂತರಿಸಿದರು.
ಲಾಭಾಂಶ ಮೊತ್ತದ ಚೆಕ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಪಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಕುಮಾರನಾಯಕ ಅವರು ಗುರುವಾರ ಹಸ್ತಾಂತರಿಸಿದರು.   

ಬೆಂಗಳೂರು: ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತ (ಕೆಪಿಸಿಎಲ್‌) ತನ್ನ ಲಾಭಾಂಶದ ₹ 43.46 ಕೋಟಿಯನ್ನು ಸರ್ಕಾರಕ್ಕೆ ಸಲ್ಲಿಸಿತು.
ಗುರುವಾರ ನಡೆದ ನಿರ್ದೇಶಕರ ಮಂಡಳಿ ಸಭೆಯಲ್ಲಿ ಲಾಭಾಂಶ ಮೊತ್ತದ ಚೆಕ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಪಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಜಿ. ಕುಮಾರ ನಾಯಕ ಅವರು ಹಸ್ತಾಂತರಿಸಿದರು.

ಕೆಪಿಸಿಎಲ್‌ 2015–16ನೇ ಸಾಲಿನಲ್ಲಿ ವಿದ್ಯುತ್‌ ಮಾರಾಟದಿಂದ 8,067 ಕೋಟಿ ವಹಿವಾಟು ನಡೆಸಿದೆ. ಇದರಲ್ಲಿ ತೆರಿಗೆ ಪೂರ್ವದ ಲಾಭ ₹277 ಕೋಟಿ ಮತ್ತು ತೆರಿಗೆ ನಂತರದ ಲಾಭ ₹182 ಕೋಟಿ ಇದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.