ADVERTISEMENT

ಗೋಡೆಗೆ ಹಣೆ ಚಚ್ಚಿಕೊಂಡ ಹುಚ್ಚ ವೆಂಕಟ್

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2015, 20:07 IST
Last Updated 30 ನವೆಂಬರ್ 2015, 20:07 IST

ಬೆಂಗಳೂರು: ಜಾಮೀನು ಸಿಕ್ಕರೂ ಜೈಲಿನಿಂದ ಬಿಡುಗಡೆಯಾಗಿಲ್ಲ ಎಂದು ಬೇಸತ್ತು, ನಟ ಹುಚ್ಚ ವೆಂಕಟ್ ಅವರು ಸೋಮವಾರ ಗೋಡೆಗೆ ಹಣೆ ಚಚ್ಚಿಕೊಂಡು ಗಾಯ ಮಾಡಿಕೊಂಡಿದ್ದಾರೆ.

ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಬಂಧಿತರಾಗಿರುವ ನಟ ಹುಚ್ಚ ವೆಂಕಟ್ ಅವರು, ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಹುಚ್ಚ ವೆಂಕಟ್‌ ಅವರು ಗೋಡೆಗೆ ಹಣೆ ಚಚ್ಚಿಕೊಂಡು ಗಾಯಮಾಡಿ ಕೊಂಡಿದ್ದಾರೆ. ಅವರಿಗೆ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.