ADVERTISEMENT

ಗೋಸಾಯಿ ಮಹಾ ಸಂಸ್ಥಾನ ನಾಳೆ ಪೀಠಾಧ್ಯಕ್ಷರ ಪಟ್ಟಾಭಿಷೇಕ

ಸುದ್ದಿ 2 ನಿಮಿಷ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2015, 19:49 IST
Last Updated 27 ಮಾರ್ಚ್ 2015, 19:49 IST

ಬೆಂಗಳೂರು:  ಗೋಸಾಯಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾಗಿ ಆಯ್ಕೆಯಾಗಿರುವ ಬುದ್ಧಿ ಯೋಗಾನಂದ ಸ್ವಾಮೀಜಿ ಅವರ ಪೀಠಾರೋಹಣ ಪಟ್ಟಾಭಿಷೇಕ ಕಾರ್ಯಕ್ರಮವನ್ನು ಭಾನುವಾರ (ಮಾ. 29) ಹಮ್ಮಿಕೊಳ್ಳಲಾಗಿದೆ.

ಪಟ್ಟಾಭಿಷೇಕಕ್ಕೆ ಮುಂಚಿನ ಧಾರ್ಮಿಕ ವಿಧಿ ವಿಧಾನಗಳು ಶುಕ್ರವಾರ ಸಂಜೆಯಿಂದಲೇ ಪ್ರಾರಂಭವಾಗಿವೆ. ಗವೀಪುರದ ಗವಿಗಂಗಾಧರೇಶ್ವರಸ್ವಾಮಿ ದೇವಸ್ಥಾನದ ಪಕ್ಕದಲ್ಲಿರುವ ಸಂಸ್ಥಾನ ಮಠದ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ವಿವಿಧ ರಾಜಕೀಯ ಪಕ್ಷಗಳ ನಾಯಕರು, ನಾಡಿನ ಪ್ರಮುಖ ಮಠಗಳ ಪೀಠಾಧ್ಯಕ್ಷರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.